Ganga Kalyana Yojana: ರೈತರಿಗೆ ಈಗ ಉಚಿತ ಬೋರ್ವೆಲ್ ಪಡೆಯಲು ಅರ್ಜಿ ಸಲ್ಲಿಕೆ ಪ್ರಾರಂಭ! ಅರ್ಜಿಯನ್ನು ಸಲ್ಲಿಸುವುದು ಹೇಗೆ? ಇಲ್ಲಿದೆ ನೋಡಿ ಮಾಹಿತಿ.
ಈಗ ನಮ್ಮ ಕರ್ನಾಟಕ ರಾಜ್ಯ ಸರ್ಕಾರವು ಈಗ ರಾಜ್ಯದಲ್ಲಿರುವಂತ ಸಣ್ಣ ಮತ್ತು ಅತಿ ಸಣ್ಣ ರೈತರಿಗೆ ಕೃಷಿಯನ್ನು ಅಭಿವೃದ್ಧಿ ಪಡಿಸುವ ಉದ್ದೇಶದಿಂದ ಈಗ ಹಾಗು ಅವರ ಆರ್ಥಿಕ ಪರಿಸ್ಥಿತಿಯನ್ನು ಸುಧಾರಣೆ ಮಾಡುವ ಉದ್ದೇಶದಿಂದಾಗಿ ಈಗ ಮತ್ತೊಂದು ಮಹತ್ವದ ಯೋಜನೆಯೆಂದರೆ ಅದು ಗಂಗಾ ಕಲ್ಯಾಣ ಯೋಜನೆ. ಈಗ ಈ ಒಂದು ಯೋಜನೆ ಅಡಿಯಲ್ಲಿ ಈಗ ಅರ್ಹ ರೈತರು ತಮ್ಮ ಜಮೀನುಗಳಿಗೆ ನೀರಾವರಿ ಸೌಲಭ್ಯವನ್ನು ಪಡೆದುಕೊಳ್ಳಲು ಸರ್ಕಾರ ಅರ್ಥಿಕ ಸಹಾಯಧನವನ್ನು ಪಡೆಯಬಹುದು. ಈಗ ನೀವೇನಾದರೂ ಬೋರವೆಲ್ ಕೊರೆಸಿಕೊಳ್ಳಬೇಕು ಎಂದುಕೊಂಡಿದ್ದರೆ ಸರ್ಕಾರದಿಂದ ನಿಮಗೆ ಗರಿಷ್ಠ 3.50 ಲಕ್ಷದವರೆಗೆ ಸಹಾಯಧನವನ್ನು ಪಡೆದುಕೊಳ್ಳಬಹುದು.
ಈ ಒಂದು ಯೋಜನೆಯ ಮುಖ್ಯ ಉದ್ದೇಶ ಏನು?
- ಈಗ ಈ ಒಂದು ಯೋಜನೆ ಉದ್ದೇಶವೇನೆಂದರೆ ಸಣ್ಣ ಮತ್ತು ಅತಿ ಸಣ್ಣ ರೈತರಿಗೆ ಈಗ ನೀರಾವರಿ ಸೌಲಭ್ಯವನ್ನು ನೀಡುವುದು ಈ ಒಂದು ಯೋಜನೆಯ ಉದ್ದೇಶ.
- ಹಾಗೆಯೇ ಮಳೆ ಆಶ್ರಿತ ಕೃಷಿಯನ್ನು ಅವಲಂಬಿಸಿರುವ ರೈತರಿಗೆ ನೀರಿನ ಅಭಾವವನ್ನು ನೀಗಿಸುವ ಉದ್ದೇಶ.
- ಹಾಗೆ ರೈತರಿಗೆ ಉತ್ತಮ ಗುಣಮಟ್ಟದ ಬೆಳೆಗಳನ್ನು ಬೆಳೆದುಕೊಳ್ಳಲು ಈಗ ಪ್ರೋತ್ಸಾಹವನ್ನು ನೀಡುವುದು.
- ಆನಂತರ ರೈತರ ಆದಾಯವನ್ನು ಹೆಚ್ಚಿಗೆ ಮಾಡಿ. ಅವರನ್ನು ಆರ್ಥಿಕವಾಗಿ ಸ್ವಾಲಂಬಿಗಳನ್ನಾಗಿ ಮಾಡುವುದು.
- ಕೃಷಿ ಉತ್ಪಾದಕತೆಯನ್ನು ಹೆಚ್ಚಿಗೆ ಮಾಡಿ. ರಾಜ್ಯದ ಕೃಷಿ ಕ್ಷೇತ್ರಕ್ಕೆ ಕೊಡುಗೆಯನ್ನು ನೀಡುವುದು. ಈ ಒಂದು ಯೋಜನೆ ಮುಖ್ಯ ಉದ್ದೇಶ.
ಯಾರೆಲ್ಲಾ ಅರ್ಹರು
- ಈಗ ಈ ಒಂದು ಯೋಜನೆಗೆ ಅರ್ಜಿಯನ್ನು ಸಲ್ಲಿಸುವ ರೈತರು ಕರ್ನಾಟಕದ ಖಾಯಂ ನಿವಾಸಿ ಆಗಿರಬೇಕು.
- ಆನಂತರ ಸಣ್ಣ ಮತ್ತು ಅತಿ ಸಣ್ಣ ರೈತರು ಈ ಒಂದು ಯೋಜನೆಗೆ ಅರ್ಜಿಯನ್ನು ಸಲ್ಲಿಕೆ ಮಾಡಬಹುದು.
- ಹಾಗೆ ಅರ್ಜಿದಾರರು ಸಮಾಜ ಕಲ್ಯಾಣ ಇಲಾಖೆ ಅಡಿಯಲ್ಲಿ ಬರುವಂತಹ ವಿವಿಧ ನಿಗಮಗಳ ವ್ಯಾಪ್ತಿಗೆ ಸೇರಿದವರು ಆಗಿರಬೇಕು.
ಈ ಯೋಜನೆಯ ಸಹಾಯಧನ ಎಷ್ಟು?
ಈಗ ಈ ಒಂದು ಯೋಜನೆ ಅಡಿಯಲ್ಲಿ ಬೋರ್ವೆಲನ್ನು ಕೊರೆಸಿಕೊಳ್ಳಲು ರೈತರಿಗೆ 1.5 ಲಕ್ಷ ರುಪಾಯಿಗಳಿಂದ 3.50 ಲಕ್ಷದವರೆಗೆ ಸಹಾಯಧನವನ್ನು ನೀಡಲಾಗುತ್ತದೆ.
ಇದನ್ನು ಓದಿ : PSI Free Coaching: ಸಬ್ ಇನ್ಸ್ಪೆಕ್ಟರ್ ನೇಮಕಾತಿ ಪರೀಕ್ಷಾ ಪೂರ್ವ ತರಬೇತಿಗೆ ಅರ್ಜಿ ಪ್ರಾರಂಭ! ಈ ಕೂಡಲೇ ಅರ್ಜಿಯನ್ನು ಸಲ್ಲಿಸಿ.
ಬೇಕಾಗುವ ದಾಖಲೆಗಳು ಏನು?
- ಆಧಾರ್ ಕಾರ್ಡ್
- ಜಮೀನಿನ ಪ್ರಮಾಣ ಪತ್ರಗಳು
- ಜಾತಿ ಮತ್ತು ಆದಾಯ ಪ್ರಮಾಣ ಪತ್ರ
- ಬ್ಯಾಂಕ್ ಖಾತೆ ವಿವರಗಳು
- ಮೊಬೈಲ್ ನಂಬರ್
- ಇತ್ತೀಚಿನ ಭಾವಚಿತ್ರ
ಅರ್ಜಿಯನ್ನು ಸಲ್ಲಿಸುವುದು ಹೇಗೆ?
ಈಗ ಈ ಒಂದು ಯೋಜನೆಗೆ ಅರ್ಜಿಯನ್ನು ಸಲ್ಲಿಕೆ ಮಾಡುವಂತಹ ರೈತರು ಈಗ ಸಮಾಜ ಕಲ್ಯಾಣ ಇಲಾಖೆ ಅಡಿಯಲ್ಲಿ ಬರುವಂತಹ ನಿಗಮಗಳನ್ನು ಸಂಪರ್ಕಿಸಿ ಅರ್ಜಿ ನಮೂನೆ ಮತ್ತು ಅಗತ್ಯ ಇರುವಂತ ದಾಖಲೆಗಳನ್ನು ನೀಡುವುದರ ಮೂಲಕ ಈ ಒಂದು ಯೋಜನೆಗೆ ಅವರು ಕೂಡ ಅರ್ಜಿಯನ್ನು ಸಲ್ಲಿಕೆ ಮಾಡಬಹುದು.